Tumkurnews
ಕೊರಟಗೆರೆ; ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ದೀನದಯಾಳ್ ಅಂತ್ಯೋದಯ ಯೋಜನೆ ನಲ್ಮ್ ಅಭಿಯಾನದಲ್ಲಿ 2022-23ನೇ ಸಾಲಿನ ಬಡತನ ರೇಖೆಗಿಂತ ಕೆಳಗಿರುವ 18 ರಿಂದ 45 ವಷ ವಯೋಮಿತಿಯೊಳಗಿನ ನಿರುದ್ಯೋಗ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಯೋಜನೆಯಡಿ, ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸ್ವ-ಸಹಾಯ ಗುಂಪುಗಳನ್ನು ರಚನೆ ಮಾಡಲು ಮತ್ತು ಈಗಾಗಲೇ ಈ ಕಾರ್ಯಾಲಯದಿಂದ ರಚಿತವಾಗಿರುವ ಸ್ವ-ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯಕ್ಕಾಗಿ ಹಾಗೂ ಕಿರು ಆಹಾರ ಸಂಸ್ಕರಣ ಉದ್ದಿಮೆ ಯೋಜನೆಗಾಗಿಯೂ ಸಹ ಅರ್ಜಿ ಸಲ್ಲಿಸಬಹುದು.
ಆಸಕ್ತರು ಭರ್ತಿ ಮಾಡಿದ ಅರ್ಜಿಗಳೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ, ಆಧಾರ್ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗು ಇತ್ತೀಚಿನ ಪಾಸ್ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಜುಲೈ 15ರ ಸಂಜೆ 5 ಗಂಟೆಯೊಳಗೆ ಪಟ್ಟಣ ಪಂಚಾಯತಿ ಕಾರ್ಯಾಲಯ ಕೊರಟಗೆರೆ ಇಲ್ಲಿಗೆ ಸಲ್ಲಿಸಬಹುದೆಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
+ There are no comments
Add yours