ಮಳೆ ಅವಾಂತರ; ವಿದ್ಯುತ್ ಸ್ಪರ್ಶಿಸಿ ಪಾವಗಡದ ವಾಟರ್ ಮ್ಯಾನ್ ಸಾವು

1 min read

Tumkurnews
ಪಾವಗಡ; ವಿದ್ಯುತ್ ಸ್ಪರ್ಶದಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಟರ್ ಮ್ಯಾನ್ ಈರಣ್ಣ(61) ಎಂಬುವವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ವೀರನಹಳ್ಳಿ ಗ್ರಾಮದ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈರಣ್ಣ, ಇಂದು ಬೆಳಗ್ಗೆ ನೀರಿನ ಮೋಟರ್ ಸ್ವಿಚ್ ಆನ್ ಮಾಡಲು ಹೋಗಿದ್ದಾಗ ಘಟನೆ ಸಂಭವಿಸಿದೆ.
ಈರಣ್ಣ, ವೀರಮ್ಮನಹಳ್ಳಿ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ವಾಟರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರೈತರು ವಿದ್ಯುತ್ ಉತ್ಪಾದನೆ ಮಾಡಿದರೆ ಸರ್ಕಾರದಿಂದ ಸಹಾಯಧನ; ಜಿಲ್ಲಾಧಿಕಾರಿ
ಕಳೆದೊಂದು ವಾರದಿಂದ ಸತತ ವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೋಟಾರ್ ಬಾಕ್ಸ್ ನಲ್ಲಿ ಮಳೆ ನೀರು ಸೇರಿಕೊಂಡಿದ್ದು, ಗ್ರೌಂಡ್ ಆಗಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಬೆಸ್ಕಾಂ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಧಿ ಕದಿಯಲು ಬಂದವರನ್ನು ಜೈಲಿಗಟ್ಟಿದ ಆಂಜನೇಯ!; ಮಾರುತಿ ಮಹಿಮೆ ಎಂದ ಭಕ್ತರು
ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಂತಹ ಘಟನೆಗಳು ಅಲ್ಲಲ್ಲಿ ಸಂಭವಿಸುತ್ತಿದ್ದು, ಮುಂಜಾಗ್ರತೆಯಾಗಿ ಬೆಸ್ಕಾಂನಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಬೇಕಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ; ಇಮ್ರಾನ್ ಉಲ್ಲಾ, ಪಾವಗಡ

About The Author

You May Also Like

More From Author

+ There are no comments

Add yours