ಸಚಿವ ಬಿ.ಸಿ ನಾಗೇಶ್ ವಿರುದ್ಧ ದೇಶದ್ರೋಹ ಆರೋಪ; ಪೊಲೀಸ್ ದೂರು

1 min read

 

Tumkurnews
ತುಮಕೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ‌ ಧ್ವಜ ಹಾರಿಸಿರುವ ಆರೋಪದ‌ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.
ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಿಪಟೂರಿನಲ್ಲಿ ಸಾವಿರ ಮಕ್ಕಳು ಪಾಲ್ಗೊಂಡು ನಡೆದ 180 ಅಡಿ ಉದ್ದದ ತಿರಂಗ ಯಾತ್ರೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪಾಲ್ಗೊಂಡಿದ್ದರು. ಈ ತಿರಂಗ ಮೆರವಣಿಗೆಯಲ್ಲಿ‌ ರಾಷ್ಟ್ರಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಾಟ ಮಾಡಲಾಗಿತ್ತು.

KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ!

ಇದು ರಾಷ್ಟ್ರದ್ರೋಹಕ್ಕೆ ಸಮಾನಾದ ಅಪರಾಧವಾಗಿದೆ. ಶಾಲಾ ಮಕ್ಕಳನ್ನು ಇಂತಹ ದೇಶವಿರೋಧಿ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದುರ್ದೈವದ ಸಂಗತಿ. ಹಾಗಾಗಿ ಈ ಬಗ್ಗೆ ಸೂಕ್ತ ತನಿಖೆ‌ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ್ ತಿಪಟೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಅರುಂಧತಿ ಸಿನಿಮಾ ನೋಡಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿ!

About The Author

You May Also Like

More From Author

+ There are no comments

Add yours