ಕೇಂದ್ರದ ವಿರುದ್ಧ ಮತ್ತೊಮ್ಮೆ ಸಮರ ಸಾರಿದ ರೈತ ಸಂಘ; ರಾಜ್ಯವ್ಯಾಪ್ತಿ ಪ್ರತಿಭಟನೆಗೆ ಕರೆ

1 min read

Tumkurnews
ತುಮಕೂರು; ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಮಾಡಲು ಸಂಸತ್ತಿನ ಉಪಸಮಿತಿಯ ಮುಂದೆ ಮಂಡಿಸಿರುವ ವಿದ್ಯುತ್ ಖಾಸಗೀಕರಣ ಮಸೂದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಹಾಗೂ ರೈತರಿಗೆ ಮಾರಕವಾಗಿರುವ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಅ.10 ರಂದು ರಾಜ್ಯದ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರೈತರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ರೈತರು ವಿದ್ಯುತ್ ಉತ್ಪಾದನೆ ಮಾಡಿದರೆ ಸರ್ಕಾರದಿಂದ ಸಹಾಯಧನ; ಜಿಲ್ಲಾಧಿಕಾರಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಮಂಡಿಸಿರುವ ವಿದ್ಯುತ್ ಖಾಸಗಿ ಬಿಲ್ ಏನಾದರು ಜಾರಿಗೆ ಬಂದರೆ, ಇಡೀ ದೇಶದಲ್ಲಿ ಆಹಾರ ಸ್ವಾವಲಂಬನೆ ಹಾಳಾಗುವುದಲ್ಲದೆ, ರೈತರು, ಬಡವರು ವಿದ್ಯುತ್ ಬಿಲ್ ಭರಿಸಲಾಗದೆ ಬೀದಿಗೆ ಬೀಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಹಾಗಾಗಿ ಪ್ರಥಮ ಹಂತವಾಗಿ ಈ ಹೋರಾಟವನ್ನು ರೈತ ಸಂಘ ಹಮ್ಮಿಕೊಂಡಿದೆ ಎಂದರು.
ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣದ ಬಗ್ಗೆ ಈಗಾಗಲೇ ರಾಷ್ಟ್ರದಲ್ಲಿರುವ ರಾಜ್ಯಗಳ ಅಭಿಪ್ರಾಯ ಕೇಳಿದ್ದು, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದ ಬಹುತೇಕ ರಾಜ್ಯಗಳು ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿವೆ. ಆದರೆ ಕರ್ನಾಟಕ ಮಾತ್ರ ಇದುವರೆಗೂ ತನ್ನ ಅಭಿಪ್ರಾಯ ತಿಳಿಸಿಲ್ಲ. ಕೂಡಲೇ ರಾಜ್ಯ ಸರಕಾರ ಮೌನ ಮುರಿದು ಅಭಿಪ್ರಾಯ ತಿಳಿಸಬೇಕು. ಯಾವುದೇ ಕಾರಣಕ್ಕೂ ರೈತರ ಪಂಪ್‍ಸೆಟ್‍ಗಳಿಗೆ ಮೀಟರ್ ಅಳವಡಿಸುವುದಿಲ್ಲ ಎಂಬು ಘೋಷಣೆಯನ್ನು ಮಾಡಬೇಕೆಂಬುದು ರಾಜ್ಯದ ರೈತರ ಆಗ್ರಹವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ರೈತ ವಿದ್ಯಾನಿಧಿಗೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದಲ್ಲಿ ಸುಮಾರು 45 ಲಕ್ಷ ಕೊಳವೆ ಬಾವಿಗಳನ್ನು ಕೊರೆದು ರೈತರು 600 ಟಿ.ಎಂ.ಸಿ ಯಷ್ಟು ಅಂತರ್ಜಲವನ್ನು ಎತ್ತಿ ಒಂದು ಲಕ್ಷ ಹೆಕ್ಟೇರ್ ಪ್ರದೇಶವನ್ನು ನೀರಾವರಿಯಾಗಿಸಿ, ಭತ್ತ, ಕಬ್ಬು ಸೇರಿದಂತೆ ಆಹಾರದ ಬೆಳೆಗಳನ್ನು ಬೆಳೆದು ಜನರಿಗೆ ಅನುಕೂಲ ಕಲ್ಪಿಸಿದ್ದಾರೆ. ಒಂದು ವೇಳೆ ವಿದ್ಯುತ್ ಖಾಸಗೀಕರಣವಾಗಿ ಸ್ಮಾರ್ಟ್ ಮೀಟರ್ ಅಳವಡಿಸಿದರೆ, ಬಿಲ್ ಕಟ್ಟಡಲಾಗದೆ ಬಹುತೇಕ ಐಪಿ ಸೆಟ್‍ಗಳು ನಿಂತು ಹೋಗಿ, ಆಹಾರದ ಕೊರತೆಯ ಜೊತೆಗೆ, ತೋಟಗಾರಿಕಾ ಬೆಳೆಗಳ ಮೇಲು ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಅಲ್ಲದೆ, ಹಣ್ಣು, ತರಕಾರಿ, ಹೂವಿನ ಬೆಳೆಗಳ ಮೇಲೂ ದುಷ್ಪರಿಣಾಮ ಉಂಟಾಗಲಿದೆ. ಇದನ್ನು ಸರಕಾರ ಮನಗಂಡು, ವಿದ್ಯುತ್ ಖಾಸಗೀಕರಣಕ್ಕೆ ಎಂದಿಗೂ ಮುಂದಾಗಬಾರದು ಎಂಬುದು ರೈತರ ಆಗ್ರಹವಾಗಿದೆ ಎಂದರು.

ತುಮಕೂರು; ಹಾಲು ಒಕ್ಕೂಟದಿಂದ ರೈತರಿಗೆ ಭಾರೀ ಮೋಸ; ಅಕ್ರಮ ಬಯಲಿಗೆಳೆದ ಯುವ ರೈತ
ಪ್ರಧಾನಿ ಮೋದಿ ವಿದ್ಯುತ್ ಖಾಸಗೀಕರಣದ ಹೆಸರಿನಲ್ಲಿ ಸುಮಾರು 20 ಲಕ್ಷ ಕೋಟಿ ಕೆಪಿಟಿಸಿಎಲ್ ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳ ಆಸ್ತಿಯನ್ನು ತಮ್ಮ ಆಪ್ತರಿಗೆ ವಹಿಸಿಕೊಡಲು ಮುಂದಾಗಿದ್ದಾರೆ. ಇದರಿಂದ ದೇಶದ ಅರ್ಥ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬುದನ್ನು ಸರಕಾರಗಳು ಅರ್ಥ ಮಾಡಿಕೊಳ್ಳಬೇಕು ಎಂದು ಗೋವಿಂದರಾಜು ಆಗ್ರಹಿಸಿದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಚಾಲನೆ; ಪ್ರಹ್ಲಾದ್ ಜೋಶಿ
ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಮಸೂದೆ ವಾಪಸ್ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅ.10 ರಂದು ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕರೆ ನೀಡಿರುವ ಪ್ರತಿಭಟನೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸುವಂತೆ ಎ.ಗೋವಿಂದರಾಜು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ, ನರಸಿಂಹಮೂರ್ತಿ, ಪೂಜಾರಪ್ಪ, ಕೆಂಚಪ್ಪ, ಜಯಣ್ಣ, ರಂಗಹನುಮಯ್ಯ, ಶಬ್ಬೀರ್, ಲೋಕೇಶ್, ಮಹಿಳಾ ಘಟಕದ ಅಧ್ಯಕ್ಷ ನಾಗರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.

ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಗೆ ರೈತರ ವಿರೋಧ; ಹೋರಾಟಕ್ಕೆ ಚಾಲನೆ

About The Author

You May Also Like

More From Author

+ There are no comments

Add yours