ಅಪ್ಪು ಸ್ಮರಣೆಯಲ್ಲಿ ‌ಮಿಂದೆದ್ದ ಕಲ್ಪತರು ನಾಡು

1 min read

ಅಪ್ಪು ಸ್ಮರಣೆಯಲ್ಲಿ ‌ಮಿಂದೆದ್ದ ಕಲ್ಪತರು ನಾಡು

Tumkurnews
ತುಮಕೂರು; ಜಿಲ್ಲೆಯ ಹಲವೆಡೆ ಶನಿವಾರ ಚಿತ್ರನಟ, ಕರ್ನಾಟಕ ರತ್ನ ಪು‌ನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯನ್ನು ನೆರವೇರಿಸಲಾಯಿತು.
ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮಸ್ಥರು ಮತ್ತು ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಪೂರ್ವಕವಾಗಿ  ಆಚರಿಸಿದರು.
ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಹುದೊಡ್ಡ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸಾಧನೆಗೈದ ಕರ್ನಾಟಕ ರತ್ನ, ಪುನೀತ್ ರಾಜಕುಮಾರ್ ಅವರ ಸಾವಿನಿಂದ ಇಡಿ ವಿಶ್ವವೇ ಕಂಬನಿಯನ್ನು ಮಿಡಿದಿತ್ತು. ಪ್ರತಿ ಹಳ್ಳಿಯಲ್ಲಿಯೂ ಸಹ ದೇವರಂತೆಯೇ ಪುನೀತ್ ರಾಜಕುಮಾರ್ ಅವರನ್ನು ಅವರ ಅಭಿಮಾನಿಗಳು ಆರಾಧಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಅಪ್ಪು ನಡೆದು ಬಂದಂತೆ ರಾಜ್ಯದ ಸಾವಿರಾರು ಸಂಘಟನೆಗಳು, ಸಾವಿರಾರು ಸಂಘ ಸಂಸ್ಥೆಗಳು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕಳೆದ ಒಂದು ವರ್ಷಗಳಿಂದ ಸಾವಿರಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರು.
ಇಂದಿಗೆ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಪಾರ ಅಭಿಮಾನಿಗಳನ್ನು ಅಗಲಿ ಒಂದು ವರ್ಷ ಕಳೆಯಿತು. ಆದಕಾರಣ ನೇಗಲಾಲ ಗ್ರಾಮದ ಅಭಿಮಾನಿಗಳು ಮತ್ತು ಗ್ರಾಮಸ್ಥರು ಭಕ್ತಿ ಪೂರ್ವಕವಾದ ನಮನಗಳನ್ನು ಸಲ್ಲಿಸಿ, ಸರ್ಕಾರಿ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಇದೇ ವೇಳೆ ಅನ್ನ ಸಂತರ್ಪಣೆ ನೆರವೇರಿಸಲಾಯಿತು.
ಗ್ರಾಮದ ಅಪ್ಪು ಅಭಿಮಾನಿಗಳಾದ ರವೀಶ್, ಮಹೇಶ್, ಶ್ರೀಧರ್, ನವೀನ್, ಪ್ರದೀಪ್, ಮಂಜುನಾಥ್, ಲೋಕೇಶ್, ಪುಟ್ಟರಾಜು, ರಾಜು, ರವಿಕುಮಾರ್ ಮತ್ತು ಅಭಿಮಾನಿಗಳು, ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.

About The Author

You May Also Like

More From Author

+ There are no comments

Add yours