https://chat.whatsapp.com/Haj1IrKLgZpAIglCBfQbtB" alt="" width="397" height="133" />
Tumkurnews
ಬೆಂಗಳೂರು; ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್. ಆರ್ ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಸ್.ಆರ್ ಶ್ರೀನಿವಾಸ್ ಗೆಲುವು ಸಾಧಿಸಿದ್ದರು. ಆ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರೊಂದಿಗೆ ಮನಸ್ತಾಪ ಉಂಟಾಗಿ ಜೆಡಿಎಸ್ ವಿರುದ್ಧವೇ ಹೇಳಿಕೆಗಳನ್ನು ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಎಸ್.ಆರ್ ಶ್ರೀನಿವಾಸ್ ಅವರನ್ನು ಉಚ್ಛಾಟಿಸಲಾಗಿತ್ತು. ಇದೀಗ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.
+ There are no comments
Add yours