ಜಿಲ್ಲಾಧಿಕಾರಿಗಳ ಖಾತೆಯಲ್ಲಿ 19 ಕೋಟಿ ಹಣ ಇದೆ: ಡಾ. ಜಿ. ಪರಮೇಶ್ವರ್

1 min read

 

 

 

 

 

ಜಿಲ್ಲಾಧಿಕಾರಿಗಳ ಖಾತೆಯಲ್ಲಿ 19 ಕೋಟಿ ಹಣ ಇದೆ: ಜಿಲ್ಲಾ ಉಸ್ತುವಾರಿ ಡಾ. ಜಿ. ಪರಮೇಶ್ವರ್

Tumkurnews
ತುಮಕೂರು; ಬೇಸಿಗೆ ಬರುತ್ತಿದ್ದಂತೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಹಣ ಇಡಲಾಗಿದೆ. ಹಾಗೆಯೇ ತುಮಕೂರು ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 19 ಕೋಟಿ ಹಣ ಇದ್ದು, ತಾಲ್ಲೂಕುವಾರು ಅರ್ಜಿಗಳನ್ನು ಪಡೆದು ಕುಡಿಯುವ ನೀರು, ಮೇವು, ಕಾಮಗಾರಿಗಳು ಹಾಗೂ ಗೋಶಾಲೆಗೆ ಹಣ ಖರ್ಚು ಮಾಡಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ? ಇಲ್ಲಿದೆ ಮಾಹಿತಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ. ಈಗ ಮತ್ತೊಂದು ವರದಿಯನ್ನು ಸಿದ್ದಪಡಿಸುತ್ತಿದ್ದು, 25 ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದೆ. ಸದ್ಯದಲ್ಲೇ ಈ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ನಾಳೆ ತುಮಕೂರು ದಸರಾಗೆ ಚಾಲನೆ: ಇಲ್ಲಿದೆ ಕಾರ್ಯಕ್ರಮಗಳ ವಿವರ

You May Also Like

More From Author

+ There are no comments

Add yours