ಕರ್ತವ್ಯಲೋಪ: ಮೂವರು ಪೊಲೀಸರ ಅಮಾನತು
Tumkurnews
ತುಮಕೂರು: ಕರ್ತವ್ಯ ಲೋಪ ಆರೋಪದ ಮೇರೆಗೆ ಮೂವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಆದೇಶ ಹೊರಡಿಸಿದ್ದಾರೆ.
ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಹೆಡ್ ಕಾನ್ಸ್’ಟೇಬಲ್ ಶಿವಣ್ಣ, ಕಾನ್ಸ್ಟೇಬಲ್ ಸಂತೋಷ್ ಹಾಗೂ ಮಹಿಳಾ ಠಾಣೆಯ ಕಾನ್ಸ್ಟೇಬಲ್ ಕುಸುಮ ಅವರು ಸೇವೆಯಿಂದ ಅಮಾನತುಗೊಳಗಾದವರು.
ಕ್ಯಾತ್ಸಂದ್ರ ಮತ್ತು ಮಹಿಳಾ ಪೊಲೀಸ್ ಠಾಣೆ ಈ ಮೂವರು ಪೊಲೀಸರ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಪೊಲೀಸರು ಮತ್ತು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ
+ There are no comments
Add yours