ತುಮಕೂರು: ಲೋಕಸಭಾ ಚುನಾವಣೆ: ಇಂದು, ನಾಳೆ ಜಾಥಾ ಕಾರ್ಯಕ್ರಮ

1 min read

 

 

 

 

 

ಲೋಕಸಭಾ ಚುನಾವಣೆ : ಇಂದು, ನಾಳೆ ಜಾಥಾ ಕಾರ್ಯಕ್ರಮ

Tumkurnews
ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮತದಾನ ಪ್ರಮಾಣವನ್ನು ಹೆಚ್ಚಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಮಾರ್ಚ್ 28ರಂದು ಸಂಜೆ 3.30 ಗಂಟೆಗೆ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತರಕಾರಿ ಮಾರುಕಟ್ಟೆ, ಅಂತರಸನಹಳ್ಳಿ(ಸಿರಾಗೇಟ್ ಹತ್ತಿರ) ಇಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಾಥಾ ಕಾರ್ಯಕ್ರಮದಲ್ಲಿ ನಗರ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ರೈತರು, ಅಧಿಕಾರಿ, ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾಲಿಕೆ ವತಿಯಿಂದ ಮಾ.29ರಂದು ಜಾಥಾ ಕಾರ್ಯಕ್ರಮ
ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಸ್ವೀಪ್ ಕಾರ್ಯಕ್ರಮದಡಿ ಮಾರ್ಚ್ 29ರಂದು ಬೆಳಿಗ್ಗೆ 9 ಗಂಟೆಗೆ ಮಹಾನಗರಪಾಲಿಕೆ ಆವರಣದಿಂದ ಬಾಲಭವನದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You May Also Like

More From Author

+ There are no comments

Add yours