ರಾಮೇಶ್ವರಂ ಕೆಫೆ ಸ್ಫೋಟ: ಕಾಫಿ ನಾಡಿನಲ್ಲಿ ಓರ್ವನ ಬಂಧನ
Tumkurnews
ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ, ಕಳಸ ತಾಲ್ಲೂಕಿನ ಮುಜಾಮಿಲ್ ಬಂಧಿತ ಆರೋಪಿ. ಈತ ಕಳೆದ 15 ವರ್ಷಗಳಿಂದ ಬೆಂಗಳೂರಿನ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದನು. ಈತನ ತಾಯಿ ಮತ್ತು ತಂಗಿ ಚಿಕ್ಕಮಗಳೂರಿನ ದುಬೈ ನಗರದಲ್ಲಿ ವಾಸವಾಗಿದ್ದಾರೆ. ಈತನ ಪತ್ನಿ ಗರ್ಭಿಣಿಯಾಗಿದ್ದು, ಸದ್ಯ ತವರೂರು ಮಂಗಳೂರಿನಲ್ಲಿ ನೆಲೆಸಿದ್ದಾಳೆ.
ಈತನ ಪಾತ್ರವೇನು?: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಂಧಿತನಾಗಿರುವ ಮುಜಾಮಿಲ್ ಎಂಬಾತ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಈತನೇ ಬಾಂಬ್’ಗೆ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಿದ್ದ ಎನ್ನಲಾಗಿದ್ದು, ತನಿಖೆ ಮುಂದುವರಿದಿದೆ.
+ There are no comments
Add yours