ಕೊರೋನಾಗೆ ಜಿಲ್ಲೆಯಲ್ಲಿ ನಾಲ್ಕನೇ ಬಲಿ

1 min read

ತುಮಕೂರು(ಜೂ.27) tumkurnews.in:
ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿಯಾಗಿದೆ.

ತುಮಕೂರಿನ ಕೃಷ್ಣ ನಗರದ 76 ವರ್ಷದ ವೃದ್ದೆ ಜೂ.24 ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವ ತಪಾಸಣೆಗೆ ಒಳಗಾಗಿದ್ದರು, ಜೂ.26 ರಂದು ಮನೆಯಲ್ಲಿ ಕುಸಿದು ಬಿದ್ದ ಕಾರಣ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಮರುದಿನ ಜೂ.27 ರಂದು ಅವರ ಕೋವಿಡ್ ತಪಾಸಣೆ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ಕಂಡು ಬಂದಿದೆ.

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರು ಅಮರ್ ಮಸೀದಿ ಮುಂದೆ ಹ್ಯಾಂಡ್ ಲೂಮ್ ಶಾಪ್ ಹೊಂದಿದ್ದ 40 ವರ್ಷದ ಪುರುಷ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಜೂ.27 ರಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿದೆ. ಈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 32 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ, 39 ಜನಗುಣಮುಖರಾಗಿದ್ದಾರೆ.

About The Author

You May Also Like

More From Author

+ There are no comments

Add yours