ತುಮಕೂರು(ಜೂ.29) tumkurnews.in
ಜಿಲ್ಲೆಯಲ್ಲಿ ಈಗಾಗಲೇ ಗುಬ್ಬಿ, ಮಧುಗಿರಿ, ಪಾವಗಡ ಪಟ್ಟಣದಲ್ಲಿ ವರ್ತಕರು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು, ಅದನ್ನು ಪಾಲಿಸುತ್ತಿದ್ದಾರೆ. ಇದೀಗ ಮತ್ತೊಂದು ತಾಲೂಕು ಕೇಂದ್ರ ಸ್ವಯಂ ಲಾಕ್ ಡೌನ್ ಗೆ ಮುಂದಾಗಿದೆ.
ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ವರ್ತಕರು ಸ್ವಯಂ ಪ್ರೇರಿತ ಲಾಕ್ ಡೌನ್ ಗೆ ಮುಂದಾಗಿದ್ದಾರೆ.
ಜೂ.30 ರಿಂದ ಜುಲೈ 20 ರ ವರೆಗೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮಾತ್ರ ಪಟ್ಟಣದಲ್ಲಿ ವ್ಯಾಪಾರ, ವಹಿವಾಟು ನಡೆಸಲು ವರ್ತಕರು ನಿರ್ಧರಿಸಿದ್ದಾರೆ.
ಈ ಬಗ್ಗೆ ಸೋಮವಾರ ತಹಶಿಲ್ದಾರರನ್ನು ಭೇಟಿ ಮಾಡಿದ ವರ್ತಕರು, ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, ಜನತೆಯ ಸಹಕಾರ ಕೋರಿದ್ದಾರೆ. ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
+ There are no comments
Add yours