ಬಿಕ್ಕೆಗುಡ್ಡ, ಹಾಗಲವಾಡಿ ರೈತರೊಂದಿಗಿನ ಸಚಿವ ಮಾಧುಸ್ವಾಮಿ ಸಭೆ ಫಲಪ್ರದ

1 min read

ತುಮಕೂರು(ಜೂ.29) tumkurnews.in:

ಬಿಕ್ಕೆಗುಡ್ಡ ಮತ್ತು ಹಾಗಲವಾಡಿ ಕುಡಿಯುವ ನೀರು ಯೋಜನೆ ನಿರ್ಮಾಣಕ್ಕೆ ರೈತರು ತಮ್ಮ ಜಮೀನು ಬಿಟ್ಟುಕೊಟ್ಟು ಯೋಜನೆಗಳನ್ನು ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಮನವಿ ಮಾಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಹೇಮಾವತಿ ನಾಲಾ ಇಂಜಿನಿಯರ್‌ಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಎರಡು ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿಸಬೇಕಾಗಿತ್ತು. ಆದರೆ ಕೆಲವೊಂದು ಕಡೆ ರೈತರು ಜಮೀನು ಬಿಟ್ಟು ಕೊಡದಿರುವುದರಿಂದ ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದರು.
ಈ ಯೋಜನೆಗಳಿಗೆ ಸ್ವಾದೀನಪಡಿಸಿಕೊಳ್ಳುವ ಭೂಮಿಗೆ ನ್ಯಾಯಸಮ್ಮತ ಬೆಲೆಯನ್ನು ರೈತರಿಗೆ ನೀಡಲಾಗುತ್ತದೆ. ಆದ್ದರಿಂದ ಭೂಮಿ ನೀಡಿ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಸಭೆಯಲ್ಲಿ ಹಾಜರಿದ್ದ ರೈತರಿಗೆ ಮನವಿ ಮಾಡಿದರು.
ಯೋಜನೆ ಹಾದು ಹೋಗುವ ಮಾರ್ಗಮಧ್ಯದಲ್ಲಿನ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ರೈತರು ಸಚಿವರಿಗೆ ಕೋರಿದರು.
ಸಭೆಯಲ್ಲಿ ಸಂಸದ ಜಿ.ಎಸ್. ಬಸವರಾಜು, ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಡಾ ಕೆ. ರಾಕೇಶ್ ಕುಮಾರ್ ಇದ್ದರು.

About The Author

You May Also Like

More From Author

+ There are no comments

Add yours