ತುಮಕೂರು(ಜು.1) tumkurnews.in
ಕೊರೋನಾ ಸೋಂಕು ಹರಡುವ ಭೀತಿಯಿಂದ
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಂಪೂರ್ಣವಾಗಿ ಸ್ಯಾನಿಟೈಜರ್ ಸಿಂಪಡಿಸಲಾಗಿದೆ.
ಜೂ.30 ರಂದು ಸಂಸದ ಜಿ.ಎಸ್ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ ನಡೆಸಲಾಗಿತ್ತು.
ಈ ಸಭೆಯಲ್ಲಿ ಭಾಗವಹಿಸಿದ್ದ ಇಂಜಿನಿಯರ್ ಓರ್ವರು ಕುಣಿಗಲ್ ತಾಲ್ಲೂಕಿನ ಸೋಂಕಿತ ವ್ಯಕ್ತಿಯೋರ್ವನ ದ್ವಿತೀಯ ಹಂತದ ಸಂಪರ್ಕದಲ್ಲಿ ಇದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮ ವಹಿಸಲಾಗಿದೆ.
ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ, ಕಚೇರಿಯಲ್ಲಿ ಸೋಂಕು ನಿವಾರಕ ಸಿಂಪಡಣೆ ಕಾರ್ಯ ಮಾಡಲಾಗಿದೆ.
ಜಿಪಂ ಕಚೇರಿಯಲ್ಲಿ ಯಾರಿಗೂ ಕೊರೋನಾ ಪಾಸಿಟಿವ್ ಬಂದಿಲ್ಲ, ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಜರ್ ಸಿಂಪಡಿಸಲಾಗಿದೆ ಎಂದು ಸಿಇಓ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ.
+ There are no comments
Add yours