ತುಮಕೂರು, (ಜೂ.22) tumkurnews.in
ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ನಗರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಡಾ.ರಫೀಕ್ ಅಹ್ಮದ್ ಪಾಲ್ಗೊಂಡು ಮಾತನಾಡಿದರು. ಕೋವಿಡ್ 19 ಲಾಕ್ ಡೌನ್ ನಿಂದ ತತ್ತರಿಸುತ್ತಿರುವ ದೇಶದ ಜನತೆಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಹೊರೆ ಬಹಳ ದುಷ್ಪರಿಣಾಮಕಾರಿಯಾಗಲಿದೆ.ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಆಡಳಿತವನ್ನು ದುರಾಡಳಿತದ ಪರಮಾವಧಿಯತ್ತ ಕೊಂಡೊಯ್ಯುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕರಾದ ಡಾ.ಷಫಿ ಅಹ್ಮದ್, ಆರ್.ನಾರಾಯಣ್, ಮಹಾನಗರ ಪಾಲಿಕೆ ಮೇಯರ್ ಫರೀದಾ ಬೇಗಂ, ಪಕ್ಷದ ವಕ್ತಾರ ಮುರಳೀಧರ ಹಾಲಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್, ಮುಖಂಡರಾದ ಕೆಂಚಮಾರಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ರಾಜು ಮತ್ತು ಮಹಬೂಬ್ ಪಾಷ ಉಪಸ್ಥಿತರಿದ್ದರು.
+ There are no comments
Add yours